ಕುಂಚ ಮಾಂತ್ರಿಕ ಮಸ್ತಾನ್ ಇನ್ನಿಲ್ಲ.

Mastan

ಸ್ಯಾಂಡಲ್‍ವುಡ್‍ನ ಖ್ಯಾತ ವಾಲ್ ಪೋಸ್ಟರ್ ಡಿಸೈನರ್ ಮಸ್ತಾನ್ ಇಂದು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.

Mastan

ಇತ್ತೀಚೆಗಷ್ಟೇ ಇವರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ರಾಜ್ ಕುಮಾರ್ ವಿಷ್ಣುವರ್ಧನ್ ಅಂಬರೀಷ್ ಕಾಲದ ಸಿನಿಮಾಗಳಿಂದಲೂ ಸುಮಾರು ಎರಡು ಸಾವಿರಕ್ಕೂ ಹೆಚ್ಚು ಸಿನಿಮಾ ಪೋಸ್ಟರ್ ಗಳಲ್ಲಿ ಮಸ್ತಾನ್ ಹೆಸರು ಅಚ್ಚಾಗಿದೆ. ಸುಮಾರು ನಲ್ವತ್ತು ವರ್ಷಗಳ ಕಾಲ ಸ್ಯಾಂಡಲ್ವುಡ್ ಗೆ ಅವಿರತ ಸೇವೆ ಸಲ್ಲಿಸಿದ್ದ ಇವರ ಸಾವು ನಿಜಕ್ಕೂ ಭರಿಸಲಾಗದ ನಷ್ಟ. ಶುಕ್ಲಾಮ್ ಭರಧರಂ, ಕಲ್ಲೇಶಿ ಮಲ್ಲೇಶಿ ಯಂತಹ ಸಿನಿಮಾಗಳನ್ನು ಕೂಡ ಇವರು ನಿರ್ದೇಶಿಸಿದ್ದರು. ಇವರ ಆತ್ಮಕ್ಕೆ ಆ ಭಗವಂತ ಶಾಂತಿಯನ್ನು ಕರುಣಿಸಲಿ ಎಂಬುದೇ ಚಿತ್ರೋದ್ಯಮ.ಕಾಂ ನ ಪಾರ್ಥನೆ.

admin (TNS)

admin (TNS)

ಸುಂದರ ಉದ್ಯಾನವನಗಳು, ಸಾಫ್ಟ್ವೇರ್ ಕಂಪನಿಗಳಿಂದ ಚಿರಪರಿಚಿತ ಊರು ಬೆಂಗಳೂರು.ಅಲ್ಲಿಂದ ಸುಮಾರು 100 ಕಿಲೋಮಿಟೆರ್ ದೂರದಲ್ಲಿರುವ ಊರು ಮಧುಗಿರಿ. "ಧರೆಯೊಳೆಲ್ಲೆ ಇರಲಿ ನಾನು ಮರೆಯಲಾರೆ ಮಧುಗಿರಿ" ಎಂದು ಹೊಯ್ಸಳ ದೊರೆಗಳಿಂದ ಹೊಗಳಿಸಿಕೊಂಡ ಇದೇ ಮಧುಗಿರಿ ಯ ತೊಂಡೋಟಿ ಎಂಬ ಒಂದು ಕುಗ್ರಾಮದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಇವರು ಅದೇ ಊರಿನಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿ, ತುಮಕೂರು ಹಾಗು ಬೆಂಗಳೂರಿನಲ್ಲಿ ತಮ್ಮ ಉನ್ನತ ವಿದ್ಯಾಭ್ಯಾಸ ವನ್ನು ಪೂರೈಸಿದರು. ನಂತರ ಮಲೇಷಿಯಾದ ಕೌಲಲಮ್ಪುರದಲ್ಲಿ ಕಂಪ್ಯೂಟರ್ ಇಂಜಿನಿಯರ್ (ಇಂಜಿನ್ ಗೆ ನೀರು ಹಾಕುವ) ಕೆಲಸ ಮಾಡುತ್ತಿದ್ದಾರೆ. ಎಸ್. ಎಲ್ ಭೈರಪ್ಪ, ಬೇಂದ್ರೆ ಯವರ ಕನ್ನಡ ಸಾಹಿತ್ಯದ ಜೊತೆ ಜೊತೆಗೆ ಯಂಡಮೂರಿ, ದೇವುಡು ರವರ ತೆಲುಗು ಸಾಹಿತ್ಯಗಳನ್ನು ಓದುವ ಹವ್ಯಾಸ ಗಳನ್ನೂ ಇಟ್ಟುಕೊಂಡ ಇವರು ಕೆಲವು ಕವನ ಹಾಗು ಕತೆಗಳನ್ನು ಸಹ ಬರೆದಿದ್ದಾರೆ. ಇವರ "ನಾನು ನಾನೇನಾ" ಎಂಬ ಕಾದಂಬರಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಕನ್ನಡ ಚಿತ್ರೋದ್ಯಮದ ವಿಶಿಷ್ಟ ಸಂಗತಿಗಳನ್ನು ಪರಿಚಯಿಸಲೆಂಬ ಉದ್ದೇಶದಿಂದ ಚಿತ್ರೋದ್ಯಮ.ಕಾಂ ಎಂಬ ಈ ವೆಬ್ಸೈಟ್ ಅನ್ನು ತೆರೆದು ತನ್ಮೂಲಕ ಕನ್ನಡ ಚಿತ್ರೋದ್ಯಮಕ್ಕೆ ತನ್ನ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Leave a Reply