ತಮಿಳಿನ ಹಾಸ್ಯನಟ ವಿವೇಕ್ ಇನ್ನಿಲ್ಲ

vivek

ನಿನ್ನೆಯಷ್ಟೇ ನಟ ವಿವೇಕ್ ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿದ್ದ ಸುದ್ದಿ ಚಿತ್ರೋದ್ಯಮ.ಕಾಂ ನಲ್ಲಿ ಪ್ರಕಟವಾಗಿತ್ತು. ನಮ್ಮ ದುರಾದೃಷ್ಟವೆಂದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗಿನ ಜಾವ ವಿವೇಕ್ ಅವರು ಕೊನೆಯುಸಿರೆಳೆದಿದ್ದಾರೆ.
ವಿವೇಕ್ ತನ್ನ ನ್ಯಾಚುರಲ್ ಹಾಸ್ಯದ ಶೈಲಿಯಿಂದಲೇ ಪ್ರಸಿದ್ದರಾದವರು. ಐದು ಬಾರಿ ತಮಿಳುನಾಡು ರಾಜ್ಯ ಚಲನಚಿತ್ರ – ಉತ್ತಮ ಹಾಸ್ಯನಟ, ಮೂರು ಬಾರಿ Filmfare- ಉತ್ತಮ ಹಾಸ್ಯನಟ ಪ್ರಶಸ್ತಿ ಇವರ ಮುಡಿಗೇರಿತ್ತು. ಅಷ್ಟೇ ಅಲ್ಲದೆ ಇವರ ಪ್ರತಿಭೆಯನ್ನು ಗುರ್ತಿಸಿ ಭಾರತ ಸರ್ಕಾರವು ಇವರಿಗೆ 2009 ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ದಯಪಾಲಿಸಿತ್ತು. ರಜನಿಕಾಂತ್, ಕಮಲ್ ಹಾಸನ್, ಸೂರ್ಯ, ವಿಜಯ್, ಅಜಿತ್ ಸೇರಿದಂತೆ ಬಹುತೇಕ ತಮಿಳಿನ ಎಲ್ಲಾ ನಂತರ ಜೊತೆ ಸುಮಾರು ಇನ್ನೂರ ಇಪ್ಪತ್ತಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಪ್ರೇಕ್ಷಕರನ್ನು ಹೊಟ್ಟೆ ಹುಣ್ಣಾಗುವಂತೆ ನಗೆಗಡಲಿನಲ್ಲಿ ತೇಲಿಸಿದ್ದರು. ನಮಗೆ ದೊರೆತಿರುವ ಮಾಹಿತಿಯಂತೆ ಕಮಲ್ ಹಾಸನ್ ಜೊತೆಗೆ ನಟಿಸಿರುವ ಇನ್ನೂ ಬಿಡುಗಡೆಯಾಗದಿರುವ, ಶಂಕರ್ ನಿರ್ದೇಶನದ ಇಂಡಿಯನ್ – 2 ಇವರ ಕೊನೆಯ ಚಿತ್ರ.
ತನ್ನ ವಿಶಿಷ್ಟ ಡೈಲಾಗ್ ಡೆಲಿವರಿ ಸ್ಟೈಲ್ ನಿಂದಲೇ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಈ ನಟ ಇಂದು ನಮ್ಮೊಡನೆ ಇಲ್ಲದಿರುವುದು ತಮಿಳು ಸಿನಿಮಾ ಅಭಿಮಾನಿಗಳನ್ನು ದುಃಖದ ಕಡಲಲ್ಲಿ ತೇಲಿಸಿದೆ. ಇವರ ಆತ್ಮಕ್ಕೆ ಶಾಂತಿ ಸಿಗಲಿ ಎಂಬುದೇ ಆ ದೇವರಲ್ಲಿ ಚಿತ್ರೋದ್ಯಮ.ಕಾಂ ನ ಪ್ರಾರ್ಥನೆ.

admin (TNS)

admin (TNS)

ಸುಂದರ ಉದ್ಯಾನವನಗಳು, ಸಾಫ್ಟ್ವೇರ್ ಕಂಪನಿಗಳಿಂದ ಚಿರಪರಿಚಿತ ಊರು ಬೆಂಗಳೂರು.ಅಲ್ಲಿಂದ ಸುಮಾರು 100 ಕಿಲೋಮಿಟೆರ್ ದೂರದಲ್ಲಿರುವ ಊರು ಮಧುಗಿರಿ. "ಧರೆಯೊಳೆಲ್ಲೆ ಇರಲಿ ನಾನು ಮರೆಯಲಾರೆ ಮಧುಗಿರಿ" ಎಂದು ಹೊಯ್ಸಳ ದೊರೆಗಳಿಂದ ಹೊಗಳಿಸಿಕೊಂಡ ಇದೇ ಮಧುಗಿರಿ ಯ ತೊಂಡೋಟಿ ಎಂಬ ಒಂದು ಕುಗ್ರಾಮದಲ್ಲಿ ಮಧ್ಯಮ ವರ್ಗದ ಕುಟುಂಬದಲ್ಲಿ ಹುಟ್ಟಿದ ಇವರು ಅದೇ ಊರಿನಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣ ಮುಗಿಸಿ, ತುಮಕೂರು ಹಾಗು ಬೆಂಗಳೂರಿನಲ್ಲಿ ತಮ್ಮ ಉನ್ನತ ವಿದ್ಯಾಭ್ಯಾಸ ವನ್ನು ಪೂರೈಸಿದರು. ನಂತರ ಮಲೇಷಿಯಾದ ಕೌಲಲಮ್ಪುರದಲ್ಲಿ ಕಂಪ್ಯೂಟರ್ ಇಂಜಿನಿಯರ್ (ಇಂಜಿನ್ ಗೆ ನೀರು ಹಾಕುವ) ಕೆಲಸ ಮಾಡುತ್ತಿದ್ದಾರೆ. ಎಸ್. ಎಲ್ ಭೈರಪ್ಪ, ಬೇಂದ್ರೆ ಯವರ ಕನ್ನಡ ಸಾಹಿತ್ಯದ ಜೊತೆ ಜೊತೆಗೆ ಯಂಡಮೂರಿ, ದೇವುಡು ರವರ ತೆಲುಗು ಸಾಹಿತ್ಯಗಳನ್ನು ಓದುವ ಹವ್ಯಾಸ ಗಳನ್ನೂ ಇಟ್ಟುಕೊಂಡ ಇವರು ಕೆಲವು ಕವನ ಹಾಗು ಕತೆಗಳನ್ನು ಸಹ ಬರೆದಿದ್ದಾರೆ. ಇವರ "ನಾನು ನಾನೇನಾ" ಎಂಬ ಕಾದಂಬರಿ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಕನ್ನಡ ಚಿತ್ರೋದ್ಯಮದ ವಿಶಿಷ್ಟ ಸಂಗತಿಗಳನ್ನು ಪರಿಚಯಿಸಲೆಂಬ ಉದ್ದೇಶದಿಂದ ಚಿತ್ರೋದ್ಯಮ.ಕಾಂ ಎಂಬ ಈ ವೆಬ್ಸೈಟ್ ಅನ್ನು ತೆರೆದು ತನ್ಮೂಲಕ ಕನ್ನಡ ಚಿತ್ರೋದ್ಯಮಕ್ಕೆ ತನ್ನ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದಾರೆ.

Leave a Reply