ತೆಲುಗು ಚಿತ್ರರಂಗದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಗೆ ಕರೋನಾ
ತೆಲುಗು ಚಿತ್ರರಂಗದ ಸ್ಟೈಲೀಶ್ ಸ್ಟಾರ್ ಅಲ್ಲು ಅರ್ಜುನ್ ರವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಸ್ವತಃ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಟ ಅಲ್ಲು ಅರ್ಜುನ್ ಮನೆಯಲ್ಲಿ ಐಸೋಲೇಶನ್ ಆಗಿದ್ದು ನಾನು ಚೆನ್ನಾಗಿದ್ದೇನೆ, ನನ್ನ ಬಗ್ಗೆ ಚಿಂತಿಸಬೇಡಿ ಮತ್ತು ಕಡ್ಡಾಯವಾಗಿ ಎಲ್ಲರೂ ಕೋವೀಡ್ ನಿಯಮಾವಳಿಗಳನ್ನು ತಪ್ಪದೇ ಪಾಲಿಸಿ ಎಂದು ತಮ್ಮ ಅಭಿಮಾನಿಗಳಿಗೆ ಸಂದೇಶವನ್ನು ನೀಡಿದ್ದಾರೆ.
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ರವರು ಆದಷ್ಟು ಬೇಗನೆ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಪುನಃ ಚಿತ್ರರಂಗದಲ್ಲಿ ಸಕ್ರೀಯವಾಗಿ ತೊಡಗಿಕೊಳ್ಳಬೇಕೆಂಬುದು ಚಿತ್ರೋದ್ಯಮ.ಕಾಂ.ತಂಡದ ಹಾರೈಕೆಯಾಗಿದೆ.
ಸಂದೀಪ ಜೋಶಿ
ಸಂದೀಪ್ ಜೋಶಿ - ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ನಿವಾಸಿಯಾಗಿದ್ದು ಪ್ರಸ್ತುತ ಸ್ವ ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ. ಬಿ.ಎ.ಮತ್ತು ಡಿಪ್ಲೊಮಾ ಇನ್ ಹಾರ್ಟಿಕಲ್ಚರ್, ಸಿ.ಟಿ.ಟಿ.ಸಿ ತರಬೇತಿ, ರೇಕಿ ಚಿಕಿತ್ಸೆ ತರಬೇತಿಯನ್ನು ಪಡೆದಿದ್ದು 13 ವರ್ಷಗಳ ಕಾಲ ರಾಯಚೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯ ಮತ್ತು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾನಿಲಯದಲ್ಲಿ ಕ್ಷೇತ್ರ ಸಹಾಯಕ, ಗಣಕಯಂತ್ರ ನಿರ್ವಾಹಕ ಕೆಲಸವನ್ನು ನಿರ್ವಹಿಸಿದ್ದಾರೆ.
ಇವರು ಲೇಖಕರಷ್ಟೇ ಅಲ್ಲ.ನಟರು ಕೂಡ. ವೃತ್ತಿಯ ಜೊತೆಗೆ ರೇಕಿ ಚಿಕಿತ್ಸೆ ಮತ್ತು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಚಿತ್ರರಂಗದ ಕೆಲವು ವಿಶಿಷ್ಟ ವಿಷಯಗಳ ಬಗ್ಗೆ ತಾನೇ ಅಲ್ಲಿ ಇಲ್ಲಿ ಸಂಶೋಧಿಸಿ, ಕೇಳಿ, ಓದಿ ತಿಳಿದ ವಿಷಯಗಳನ್ನೆಲ್ಲಾ ಒಂದೆಡೆ ಕೂಡಿಟ್ಟು, ಚಿತ್ರೋದ್ಯಮದ ಓದುಗರೊಂದಿಗೆ ಹಂಚಿಕೊಳ್ಳಲಿದ್ದಾರೆ.
ಸಂದೀಪ್ ಜೋಶಿ ಚಿತ್ರೋದ್ಯಮ.ಕಾಂ ಬರಹಗಾರರ ತಂಡದ ಬಹು ಮುಖ್ಯ ಸದಸ್ಯ.
ಸಂದೀಪ್ ಜೋಶಿಯವರ ಲೇಖನಗಳಿಗೆ ನಿಮ್ಮದೊಂದು ಮೆಚ್ಚುಗೆಯಿರಲಿ
ಪತ್ರಿಕೋದ್ಯಮದ ಸೆಲೆಬ್ರಿಟಿ, ಸ್ಟಾರ್ ಜರ್ನಲಿಸ್ಟ್ ಅಂತಲೇ ಜನರ ಮಧ್ಯೆ ಚಿರ ಪರಿಚಿತರಾಗಿದ್ದ “ರವಿ ಬೆಳೆಗೆರೆ” ಯವರು ಅಸ್ತಂಗತರಾಗಿ ತಿಂಗಳುಗಳಾದವು. ಕಲಾವಿದರಿಗಾಗಲಿ ಬರಹಗಾರರಿಗಾಗಲಿ ಎಂದಿಗೂ ಸಾವಿಲ್ಲ, ಅವರ ಕೆಲಸ…
ಇಡೀ ಸಿನೆಮಾದಲ್ಲಿ ನಾನು ಎಂಜಾಯ್ ಮಾಡಿದ್ದೊಂದೇ… ಅದು ಡ್ರೈವಿಂಗ್.. ❤ ಅಷ್ಟು ದೊಡ್ಡ ಬಸ್ ಅನ್ನು ಅನಾಯಾಸವಾಗಿ ಓಡಿಸುತ್ತಿದ್ದ ಡ್ರೈವರಿಗೆ ನಾನು ಫಿದಾ ಆಗ್ಬಿಟ್ಟೆ… ಜೊತೆಗೆ ಒಂದೊಂದೇ…
( ಮುಂದುವರೆದ ಭಾಗ ) ತಮಿಳು ಚಿತ್ರರಂಗದಿಂದ ಪೊಲ್ಲಾದವನ್ ಚಿತ್ರಕ್ಕೆ ಅವಕಾಶ ನೀಡಿದ್ದು ಸದುಪಯೋಗ ಪಡಿಸಿಕೊಂಡರು, ಅಲ್ಲಿಯೂ ನಟಿಸಿ ಜನಮನ್ನಣೆ ಪಡೆದರು. ಚಿತ್ರ ಭಾರೀ ಯಶಸ್ಸು ಗಳಿಸಿತು.…